ಒಂದು ದಿನ ಖೇಮು ಆಫೀಸ್ ಕೆಲಸ ಮುಗಿಸಿ ಸಂಜೆ ಮನೆಗೆ ಬಂದ. ಮನೆ ಅಂಗಳದಲ್ಲಿನ ದೃಶ್ಯ ನೋಡಿ ಅವನಿಗೆ ಎದೆ ಒಡೆದುಹೋಗುವಂತಾಯಿತು. ತನ್ನ ಮನೆಯ ನಾಯಿ, ಪಕ್ಕದ ಮನೆಯ ಬೆಕ್ಕನ್ನು ಬಾಯಲ್ಲಿ ಕಚ್ಚಿ ಹಿಡಿದು ಎಳೆದಾಡುತ್ತಿತ್ತು. ಖೇಮು ಓಡಿ ಬಂದವನೇ ತನ್ನ ನಾಯಿಯನ್ನು ಹೊಡೆದು ಬೆಕ್ಕನ್ನು ಬಿಡಿಸಿಕೊಂಡ. ಮುಟ್ಟಿನೋಡಿದರೆ ಬೆಕ್ಕು ಸತ್ತು ಹೋಗಿತ್ತು. ಖೇಮುಗೆ ಗಾಬರಿ. ಮೊದಲೇ ಪಕ್ಕದ ಮನೆಯವನು ಜಗಳಗಂಟ. ಅಲ್ಲದೆ ರಿಟೈರ್ಡ್ ಮಿಲಿಟರಿ ಮ್ಯಾನ್ ಬೇರೆ. 24 ಗಂಟೆ ಕೈಯಲ್ಲಿ ಬಂದೂಕು ಹಿಡಕೊಂಡು ಮಾತಾಡಿದ್ರೆ 'ಸುಟ್ಟುಬಿಡ್ತೀನಿ' ಅಂತಿರ್ತಾನೆ. ನನ್ನ ನಾಯಿ ಅವನ ಬೆಕ್ಕನ್ನು ಸಾಯಿಸಿದೆ ಎಂದು ಗೊತ್ತಾದರೆ ನನ್ನನ್ನೂ ಸಾಯಿಸಿಬಿಡುತ್ತಾನೆ ಎಂದು ಕಂಗಾಲಾದ. ನಂತರ ಕೊಂಚ ಯೋಚಿಸಿ ಆ ಸತ್ತ ಬೆಕ್ಕಿನ ಮರಿಯನ್ನು ತೆಗೆದುಕೊಂಡು ಬಾತ್ರೂಮಿಗೆ ಹೋಗಿ ಅದನ್ನು ಚೆನ್ನಾಗಿ ತೊಳೆದು, ಮೈಮೇಲಿನ ಮಣ್ಣು ಧೂಳು ಕ್ಲೀನ್ ಮಾಡಿ ಕತ್ತಲಾಗುವವರೆಗೂ ಕಾದು ಮೆಲ್ಲನೆ ತೆಗೆದುಕೊಂಡು ಹೋಗಿ ಅದನ್ನು ಪಕ್ಕದಮನೆಯ ಅಂಗಳದಲ್ಲಿದ್ದ ಆ ಬೆಕ್ಕಿನ ಗೂಡಿನ ಒಳಗೆ ಇಟ್ಟು ಬಂದುಬಿಟ್ಟ. ಮಿಲಿಟರಿ ಮ್ಯಾನ್ ನೋಡಿದರೆ ಬೆಕ್ಕು ತನ್ನ ಗೂಡಿನಲ್ಲೇ ಸತ್ತುಹೋಗಿದೆ ಎಂದುಕೊಳ್ಳುತ್ತಾನೆ ಎಂಬ ಪ್ಲ್ಯಾನ್ ಖೇಮುನದ್ದು. ಸರಿ ಬೆಳಗ್ಗೆ ಕಾತರದಿಂದ ಬೆಳಗ್ಗೆ ಕಾತರದಿಂದ ಸ್ವಲ್ಪ ಮುಂಚೆಯೇ ಎದ್ದು ಬಂದು ಬಾಲ್ಕನಿಯಲ್ಲಿ ನಿಂತು ಆಚೀಚೆ ನೋಡಿದ ಖೇಮು. ಅದೇ ಸಮಯಕ್ಕೆ ಹೊರಗೆ ಬಂದ ಮಿಲಿಟರಿ ಮ್ಯಾನ್ ಕೇಳಿದ 'ಖೇಮು, ನಿಂಗೊಂದ್ ವಿಷ್ಯ ಗೊತ್ತಾಯ್ತಾ, ನಮ್ಮ ಬೆಕ್ಕಿನ ಮರಿ ಸತ್ತು ಹೋಯ್ತು'. ಖೇಮುಗೆ ನಾಲಗೆ ಒಣಗಿತು. ಹಾ, ಓ...ಛೆ..., ಹೌದಾ? ಎಂದು ತಡವರಿಸಿದ. ಅದಕ್ಕೆ ಮಿಲಿಟರಿ ಮ್ಯಾನ್ ಹೇಳಿದ 'ಹೌದು, ಬೆಕ್ಕಿಗೆ ಜ್ವರ ಬಂದು ಮೊನ್ನೆ ರಾತ್ರಿ ಸತ್ತುಹೋಯ್ತು, ಆದ್ರೆ ವಿಚಿತ್ರ ಅಂದ್ರೆ, ಅದನ್ನ ಮನೆ ಪಕ್ಕದ ಗುಂಡೀಲಿ ಹೂತು ಹಾಕಿದ್ದೆ. ಆದ್ರೆ ಯಾವನೋ ತಲೆಕೆಟ್ಟೋನು, ಅದನ್ನ ಗುಂಡಿಯಿಂದ ತೆಗೆದು, ಅದಕ್ಕೆ ಸ್ನಾನ ಮಾಡಿಸಿ, ಮೈ ಒರೆಸಿ ಮತ್ತೆ ವಾಪಸ್ ತಗೊಂಡ್ಬಂದು ಅದರ ಗೂಡಲ್ಲೇ ಇಟ್ಟು ಹೋಗಿದ್ದಾನೆ....!
Saturday, January 26, 2013
ಹರಿ-ಕಥೆ... (Courtesy: Hari Kannada Prabha)
Subscribe to:
Post Comments (Atom)
No comments:
Post a Comment