ಸ್ಯಾಂಡಲ್ವುಡ್
ತಮ್ಮ ನಿರ್ಮಾಣ, ನಿರ್ದೇಶನದ 'ವಿಶ್ವರೂಪಂ' ಚಿತ್ರದ ಬಿಡುಗಡೆಗೆ ತಮಿಳುನಾಡಿನಲ್ಲಿ ತೊಂದರೆ ಮಾಡಿದ್ದಕ್ಕೆ ಬೇಸರಗೊಂಡಿರುವ ಕಮಲ್ಹಾಸನ್ ರಾಜ್ಯ ಬಿಟ್ಟು ಹೋಗುವ ಮಾತನ್ನಾಡಿದ್ದಾರೆ. ಒಂದುವೇಳೆ ಅದು ಸೀರಿಯಸ್ ಆಗಿ ಕಾರ್ಯಗತವಾಗುತ್ತದೆ ಎಂದಾದರೆ ಕಮಲ್ಹಾಸನ್ ಬರುವುದಿದ್ದರೆ, ಬೆಂಗಳೂರಿಗೆ ಬರಲಿ. ಹೇಗಿದ್ದರೂ ಕರ್ನಾಟಕದಲ್ಲಿ ತಮಿಳರ ಸಂಖ್ಯೆ ಹೆಚ್ಚಾಗಿಯೇ ಇರುವುದರಿಂದ ಕಮಲ್ಗೆ ಅಲ್ಲಿಗೂ ಇಲ್ಲಿಗೂ ಹೆಚ್ಚಿನ ವ್ಯತ್ಯಾಸವೇನೂ ಕಾಣಿಸಲಾರದು. ಬೆಂಗಳೂರನ್ನು ರಿಟೈರ್ ಆದವರ ಪಾಲಿನ ಸ್ವರ್ಗ ಎನ್ನುತ್ತಾರೆ. ಆದರೆ, ಅದಕ್ಕೊಂದು ಅಪವಾದ ಎನ್ನುವಂತೆ ರಿಟೈರ್ ಆಗುವ ಮುಂಚೆಯೇ ಕಮಲ್ ಬರಲಿ. ಇಲ್ಲಿಯೇ ಇದ್ದುಕೊಂಡು, ಕನ್ನಡ ಸಿನಿಮಾಗಳನ್ನು ಮಾಡಲಿ. ಹೇಗಿದ್ರೂ ನಮ್ಮಲ್ಲಿ ಡಬ್ಬಿಂಗ್ಗೆ ಒನ್ ವೇ ಪಾಲಿಸಿ. ಅವುಗಳನ್ನು ತಮಿಳು, ತೆಲುಗಿಗೆ ಡಬ್ ಮಾಡುವುದು ಕಷ್ಟವೇನಲ್ಲ. ಅಲ್ಲದೆ, ಕರ್ನಾಟಕಕ್ಕೆ ಎಷ್ಟೋ ಜನ ತಮಿಳುನಾಡಿಂದ ಇಲ್ಲಿಗೆ ವಲಸೆ ಬಂದಿದ್ದಾರೆ, ಬರುತ್ತಿದ್ದಾರೆ, ಅದರಿಂದ ನಮ್ಮ ಕನ್ನಡಿಗರಿಗೆ ಸಮಸ್ಯೆ ಹೆಚ್ಚುತ್ತಿದೆ ಎಂಬ ಹಳೆಯ ಬೇಸರದ ನಡುವೆ ಕನ್ನಡಿಗರು ಹೆಮ್ಮೆಪಡುವಂಥ ಮತ್ತು ಖುಷಿ ಪಡುವಂಥ ಒಂದೇ ಒಂದು ವಲಸೆಯಾದರೂ ಆಗಲಿ. ಕಮಲ್ ಕರ್ನಾಟಕಕ್ಕೆ ಬರಲಿ.!
Courtesy: Harish (KP)
Sunday, February 3, 2013
ಸುಮ್ಮನೆ ಹೀಗೊಂದು ಯೋಚನೆ...
Subscribe to:
Post Comments (Atom)
No comments:
Post a Comment